ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್ನ್ನು 497 ರನ್ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.
ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.
ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…