ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್ನ್ನು 497 ರನ್ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.
ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.
ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…