Advertisement
MIRROR FOCUS

ಟ್ರಾಫಿಕ್ ಜಾಂನಿಂದ ಐಟಿ-ಬಿಟಿ ಕಂಪನಿಗಳಿಗೆ 30 ಸಾವಿರ ಕೋಟಿ ನಷ್ಟ…..! : ಗ್ರಾಮೀಣ ಭಾಗದ ರಸ್ತೆ ಸರಿ ಇಲ್ಲದೇ ಇದ್ದರೆ….?

Share

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ್ದರು. ಇಡೀ ನಗರದ ಸಮಸ್ಯೆ ಆಲಿಸಿದ್ದರು. ಈ ಸಂದರ್ಭ ಐಟಿ-ಬಿಟಿ ಕಂಪನಿಗಳ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದಾಗ  ಟ್ರಾಫಿಕ್ ಜಾಂ ನಿಂದಾಗಿ   ಐಟಿ-ಬಿಟಿ ಕಂಪನಿಗಳು ವಾರ್ಷಿಕ 30 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿವೆ ಎಂದರು. ವಾಸ್ತವವಾಗಿ ಟ್ರಾಫಿಕ್ ಜಾಂ ತೀರಾ ಸಮಸ್ಯೆ ಉಂಟು ಮಾಡುತ್ತವೆ. ಇದೇ ರೀತಿ ಗ್ರಾಮೀಣ ಭಾಗದ ರಸ್ತೆಗಳು ಸೇರಿದಂತೆ ಮೂಲಭೂತ ವ್ಯವಸ್ಥೆ ಸರಿ ಇಲ್ಲದೇ ಇದ್ದರೆ ಕೃಷಿಕರಿಗೆ ಹಾಗೂ ಗ್ರಾಮೀಣ ಭಾಗದ ಸಣ್ಣ ಸಣ್ಣ ಉದ್ದಿಮೆಗಳಿಗೂ ಹೊಡೆತ ಕೊಡುತ್ತವೆ. ನಷ್ಟ ಉಂಟು ಮಾಡುತ್ತವೆ. ಈ ಕಡೆಗೆ ಫೋಕಸ್..


ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಪ್ರದಕ್ಷಿಣೆಯ ಮೂಲಕ ವಿವಿಧ ಸಮಸ್ಯೆಯನ್ನು ಅರಿತುಕೊಂಡು ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ಹೀಗೇ ನಗರ ಪ್ರದಕ್ಷಿಣೆ ಹಾಕಿದಾಗ ವಿವಿಧ ಸಮಸ್ಯೆಗಳು ಬೆಳಕಿಗೆ ಬಂದವು. ಅದರಲ್ಲಿಜನಸಾಮಾನ್ಯರೂ ಸೇರಿದಂತೆ ದೊಡ್ಡ ದೊಡ್ಡ ಕಂಪನಿಗಳು ಅನುಭವಿಸುವ ಟ್ರಾಫಿಕ್ ಜಾಂ ಸಮಸ್ಯೆಯೂ ಕೇಳಿಬಂತು. ಅದರಲ್ಲಿ  ಐಟಿ-ಬಿಟಿ ಕಂಪನಿಗಳು ವಾರ್ಷಿಕ 30 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿವೆ ಎಂಬ ಮಾಹಿತಿಯನ್ನೂ ಕಂಪನಿ ಒಕ್ಕೂಟ ನೀಡಿತು.

 ಮಾರತ್‌ಹಳ್ಳಿಯ ಬಳಿಯ ಖಾಸಗಿ ಕಂಪನಿಯಲ್ಲಿ ಸಿಎಂ ಅವರು ರಿಂಗ್‌ ರಸ್ತೆಯ ಸುತ್ತಲಿನ ಐಟಿ-ಬಿಟಿ ಕಂಪನಿಗಳ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದಾಗ, ರಿಂಗ್‌ ರಸ್ತೆ ಸುತ್ತ  ಹೆಚ್ಚು  ಉದ್ದಿಮೆಗಳಿವೆ. ಅದರಲ್ಲೂ ಪೂರ್ವ ಭಾಗದಲ್ಲಿ ಐಟಿ-ಬಿಟಿ ಕಾರಿಡಾರ್‌ ವ್ಯಾಪ್ತಿಯಲ್ಲಿ ನೂರಾರು ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲೆಲ್ಲಾ ದೊಡ್ಡ ಸಂಖ್ಯೆಯ ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ಸ್ಥಳವನ್ನು ತಲುಪಲು ಪ್ರಯಾಸಪಡಬೇಕಿದೆ. ನಿತ್ಯ 1-2 ಗಂಟೆ ಟ್ರಾಫಿಕ್‌ನಲ್ಲೇ ಸಮಯ ವ್ಯಯವಾಗುತ್ತಿದೆ. ತಡವಾಗಿ ಬರುವ ನೌಕರ ವರ್ಗ ಹಾಗೂ ಮಾನವ ಸಂಪನ್ಮೂಲ ನಷ್ಟದಿಂದ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ ಎಂದರು. ಬಳಿಕ ಇದಕ್ಕೇನು ಪರಿಹಾರ ಎಂಬುದರ ಬಗ್ಗೆ ಯೋಜನೆ-ಯೋಚನೆ ನಡೆಯಿತು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾಡಿರುವ ಈ ನಗರ ಪ್ರದಕ್ಷಿಣೆ ಪ್ರತೀ ಕ್ಷೇತ್ರದ ಶಾಸಕರೂ ಇದೇ ಮಾದರಿ ಅನುಸರಿಸಿ ಅನುದಾನ ತರಿಸಿಕೊಂಡರೆ ಸಮಸ್ಯೆ ನಿವಾರಣೆ ಸಾಧ್ಯವಿದೆ. ಗ್ರಾಮೀಣ ಭಾಗದ ಹಲವಾರು ರಸ್ತೆಗಳು , ಸೇತುವೆಗಳು ಸರಿ ಇಲ್ಲವಾಗಿದೆ. ಕೆಲವು ಮುಖ್ಯರಸ್ತೆಗಳೂ ಸರಿ ಇಲ್ಲವಾಗಿದೆ. ಹೀಗಾಗಿ ಇವುಗಳು ದುರಸ್ತಿಗೆ ಕ್ರಮ ಕೈಗೊಂಡರೆ ಬಹುತೇಕ ಗ್ರಾಮೀಣ ಭಾಗಗಳೂ ಬೆಳಕು ಕಾಣಲು ಸಾದ್ಯವಿದೆ.ಗ್ರಾಮೀಣ ಭಾಗದ ರಸ್ತೆ ಸರಿ ಇಲ್ಲದೇ ಇದ್ದರೆ ಕೃಷಿಕರಿಗೆ ಹಾಗೂ ಸಣ್ಣ ಸಣ್ಣ ಉದ್ದಿಮೆದಾರರಿಗೆ, ನಿತ್ಯ ಸವಾರರಿಗೆ ತೀರಾ ಸಂಕಷ್ಟ. ಕೃಷಿಕ ಬೆಳೆದ ಯಾವುದೇ ವಸ್ತು ಮಾರುಕಟ್ಟೆಗೆ ತಲುಪಬೇಕಾದರೆ ವ್ಯವಸ್ಥೆ ಅಗತ್ಯ. ಸಣ್ಣ ಸಣ್ಣ ಉದ್ದಿಮೆದಾರರಿಗೆ ಹೊಂಡಗುಂಡಿಯ ರಸ್ತೆಯಲ್ಲಿ ಸಾಗಿದರೆ ವಾಹನದ ನಿರ್ವಹಣೆಗೇ ಖರ್ಚುಗಳೆಲ್ಲಾ ಬಳಕೆಯಾದರೆ ಇದೇ  ವೆಚ್ಚ ಗ್ರಾಹಕನ ಮೇಲೆಯೇ ಬೀಳುತ್ತದೆ. ಅಗನತ್ಯವಾಗಿ ಇಂಧನ ವ್ಯಯವಾಗುತ್ತದೆ, ಇಡೀ ದೇಶಕ್ಕೆ ನಷ್ಟವಾಗುತ್ತದೆ. ಇದೆಲ್ಲಾ ಜನಪ್ರತಿನಿಧಿಗಳು ಅರಿತುಕೊಂಡು ಕನಿಷ್ಟ ಅನುದಾನ ತರಿಸಿಕೊಂಡರೆ ಗ್ರಾಮೀಣ ಭಾಗವೂ ಬೆಳಕು ಕಾಣಲು ಸಾಧ್ಯವಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

14 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

14 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago