ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.
ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ. ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.