ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.
ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ. ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…