ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.
ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ. ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…