ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.
ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ. ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…