ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.
ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ. ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…