ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.
ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ. ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…