ಸುಳ್ಯ: ಬೆಂಗಳೂರಿನಲ್ಲಿ ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್ ಹಾಗೂ ಕೃಷಿಕ ಸಾಹಿತ್ಯಪರಿಷತ್ತು ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ ಸಂಸ್ಥಾನದ ಇತಿಹಾಸ ಮತ್ತು ಐತಿಹ್ಯದ ಬಗ್ಗೆ ವಿಚಾರ ಸಂಕಿರಣ’ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿರುವುದು ವಿವಾದ ಹಾಗೂ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಟ್ವಿಟ್ಟರ್ ಮೂಲಕ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ಡಿ.ವಿ.ಸದಾನಂದ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿ, ನನ್ನ ಹೆಸರಿನೊಂದಿಗೆ ಗೌಡ ಎಂಬುದನ್ನು ಸೇರಿಸಿಕೊಂಡಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ, ಈಗ ಕೇಂದ್ರ ಸಚಿವನಾಗಿದ್ದೇನೆ. ಅದನ್ನು ಹೇಳಲು ನನಗೆ ಹಿಂಜರಿಕೆ, ನಾಚಿಕೆ ಇಲ್ಲ ಎಂದು ಹೇಳಿದ್ದರು. ಇದು ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ಹಿಂದು ಸಮಾಜ ಎನ್ನುತ್ತಾ ಜಾತಿಯನ್ನು ಏಕೆ ತರುತ್ತೀರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಪರ ಸಂಘಟನೆಗಳು ಚರ್ಚೆ ಮಾಡಿದ್ದವು. ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೂ ಪ್ರಶ್ನೆ ಮಾಡಿದ್ದವು.
ಇದೀಗ ಸದಾನಂದ ಗೌಡ ಅವರು ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದು,
“ನನ್ನ ಬಿಜೆಪಿ ಪಕ್ಷ , ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಅನ್ನುವ ಮಾತನ್ನು ನಾನು ಹೆಮ್ಮೆಯಿಂದ ಕೇಳಿಕೊಂಡದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ. ನಾನಿಂದು ನಿರಂತರ ಚುನಾವಣೆಗಳನ್ನು ಗೆಲ್ಲಲು ಜಾತ್ಯತೀತವಾಗಿ.ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು. ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ” ಎಂದು ಟ್ವೀಟ್ ಮಾಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…