Advertisement
ಸುದ್ದಿಗಳು

ಟ್ವೀಟ್ ಮೂಲಕ ಸ್ಪಷ್ಟನೆ : ವಿವಾದಕ್ಕೆ ತೆರೆ ಎಳೆದ ಡಿ ವಿ ಸದಾನಂದ ಗೌಡ

Share

ಸುಳ್ಯ: ಬೆಂಗಳೂರಿನಲ್ಲಿ  ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್‌ ಹಾಗೂ ಕೃಷಿಕ ಸಾಹಿತ್ಯಪರಿಷತ್ತು  ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ ಸಂಸ್ಥಾನದ ಇತಿಹಾಸ ಮತ್ತು ಐತಿಹ್ಯದ ಬಗ್ಗೆ ವಿಚಾರ ಸಂಕಿರಣ’ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿರುವುದು ವಿವಾದ ಹಾಗೂ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಟ್ವಿಟ್ಟರ್ ಮೂಲಕ  ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ಡಿ.ವಿ.ಸದಾನಂದ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿ, ನನ್ನ ಹೆಸರಿನೊಂದಿಗೆ ಗೌಡ ಎಂಬುದನ್ನು ಸೇರಿಸಿಕೊಂಡಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ, ಈಗ ಕೇಂದ್ರ ಸಚಿವನಾಗಿದ್ದೇನೆ. ಅದನ್ನು ಹೇಳಲು ನನಗೆ ಹಿಂಜರಿಕೆ, ನಾಚಿಕೆ ಇಲ್ಲ  ಎಂದು ಹೇಳಿದ್ದರು. ಇದು ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ  ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ  ತೀವ್ರ ಚರ್ಚೆಗೆ ಕಾರಣವಾಯಿತು. ಹಿಂದು ಸಮಾಜ ಎನ್ನುತ್ತಾ ಜಾತಿಯನ್ನು ಏಕೆ ತರುತ್ತೀರಿ ಎಂದು  ಸಾಮಾಜಿಕ ಜಾಲತಾಣದಲ್ಲಿ  ಹಿಂದೂ ಪರ ಸಂಘಟನೆಗಳು ಚರ್ಚೆ ಮಾಡಿದ್ದವು. ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೂ ಪ್ರಶ್ನೆ ಮಾಡಿದ್ದವು.

ಇದೀಗ ಸದಾನಂದ ಗೌಡ ಅವರು ಟ್ವಿಟ್ಟರ್ ಮೂಲಕ  ಸ್ಪಷ್ಟನೆ ನೀಡಿದ್ದು,

ನನ್ನ ಬಿಜೆಪಿ ಪಕ್ಷ , ನನ್ನ ಹೆತ್ತ ತಾಯಿ ಸಮಾನ. ಕುಗ್ರಾಮ ಮಂಡೆಕೋಲಿನಿಂದ ಬಂದ ಈ ಹುಡುಗನಿಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ನನ್ನ ಪಕ್ಷ ಒಕ್ಕಲಿಗ ಸಮಾಜಕ್ಕೆ ಉತ್ತಮ ಸ್ಥಾನಮಾನ ಪ್ರಾತಿನಿಧಿತ್ವವನ್ನು ನನ್ನ ಮೂಲಕ ಕೊಟ್ಟಿದೆ ಅನ್ನುವ ಮಾತನ್ನು ನಾನು ಹೆಮ್ಮೆಯಿಂದ ಕೇಳಿಕೊಂಡದ್ದನ್ನು ಬೇರೆ ರೀತಿ ಅರ್ಥೈಸಲಾಗಿದೆ. ನಾನಿಂದು ನಿರಂತರ  ಚುನಾವಣೆಗಳನ್ನು ಗೆಲ್ಲಲು ಜಾತ್ಯತೀತವಾಗಿ.ಪಕ್ಷಾತೀತವಾಗಿ ನನ್ನನ್ನು ಜನರು ಆಯ್ಕೆ ಮಾಡಲು ನನ್ನ ಪಕ್ಷ ಮತ್ತು ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು. ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ” ಎಂದು ಟ್ವೀಟ್ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

19 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago