ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.
ಗೆಲುವಿಗೆ 171 ರನ್ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ವೆಸ್ಟ್ಇಂಡೀಸ್ನ ಆರಂಭಿಕ ಬ್ಯಾಟ್ಸ್ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.
ಭಾರತದ ಬೌಲರ್ಗಳ ದುರ್ಬಲ ದಾಳಿ ಮತ್ತು ಕಳಪೆ ಫೀಲ್ಡಿಂಗ್ ನ ಪ್ರಯೋಜನೆ ಪಡೆದ ವಿಂಡೀಸ್ನ ಬ್ಯಾಟ್ಸ್ಮನ್ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು. ಭಾರತದ ಪರ ಶಿವಂ ದುಬೆ 30 ಎಸೆತದಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ಸಹೀತ 54 ರನ್ ಗಳಿಸಿದರು. ಋಷಬ್ ಪಂತ್ 22 ಎಸೆತಗಳಲ್ಲಿ 33ರನ್ ಕಲೆ ಹಾಕಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…