ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.
ಗೆಲುವಿಗೆ 171 ರನ್ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ವೆಸ್ಟ್ಇಂಡೀಸ್ನ ಆರಂಭಿಕ ಬ್ಯಾಟ್ಸ್ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.
ಭಾರತದ ಬೌಲರ್ಗಳ ದುರ್ಬಲ ದಾಳಿ ಮತ್ತು ಕಳಪೆ ಫೀಲ್ಡಿಂಗ್ ನ ಪ್ರಯೋಜನೆ ಪಡೆದ ವಿಂಡೀಸ್ನ ಬ್ಯಾಟ್ಸ್ಮನ್ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು. ಭಾರತದ ಪರ ಶಿವಂ ದುಬೆ 30 ಎಸೆತದಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ಸಹೀತ 54 ರನ್ ಗಳಿಸಿದರು. ಋಷಬ್ ಪಂತ್ 22 ಎಸೆತಗಳಲ್ಲಿ 33ರನ್ ಕಲೆ ಹಾಕಿದರು.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…