ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.
ಗೆಲುವಿಗೆ 171 ರನ್ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ವೆಸ್ಟ್ಇಂಡೀಸ್ನ ಆರಂಭಿಕ ಬ್ಯಾಟ್ಸ್ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.
ಭಾರತದ ಬೌಲರ್ಗಳ ದುರ್ಬಲ ದಾಳಿ ಮತ್ತು ಕಳಪೆ ಫೀಲ್ಡಿಂಗ್ ನ ಪ್ರಯೋಜನೆ ಪಡೆದ ವಿಂಡೀಸ್ನ ಬ್ಯಾಟ್ಸ್ಮನ್ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು. ಭಾರತದ ಪರ ಶಿವಂ ದುಬೆ 30 ಎಸೆತದಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ಸಹೀತ 54 ರನ್ ಗಳಿಸಿದರು. ಋಷಬ್ ಪಂತ್ 22 ಎಸೆತಗಳಲ್ಲಿ 33ರನ್ ಕಲೆ ಹಾಕಿದರು.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…