ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.
ಗೆಲುವಿಗೆ 171 ರನ್ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ವೆಸ್ಟ್ಇಂಡೀಸ್ನ ಆರಂಭಿಕ ಬ್ಯಾಟ್ಸ್ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.
ಭಾರತದ ಬೌಲರ್ಗಳ ದುರ್ಬಲ ದಾಳಿ ಮತ್ತು ಕಳಪೆ ಫೀಲ್ಡಿಂಗ್ ನ ಪ್ರಯೋಜನೆ ಪಡೆದ ವಿಂಡೀಸ್ನ ಬ್ಯಾಟ್ಸ್ಮನ್ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು. ಭಾರತದ ಪರ ಶಿವಂ ದುಬೆ 30 ಎಸೆತದಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ಸಹೀತ 54 ರನ್ ಗಳಿಸಿದರು. ಋಷಬ್ ಪಂತ್ 22 ಎಸೆತಗಳಲ್ಲಿ 33ರನ್ ಕಲೆ ಹಾಕಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…