ಡಯಾಲಿಸಿಸ್ ಗೆ ಪರ್ಯಾಯ ವ್ಯವಸ್ಥೆ ಮಾಡದೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ- ಎಸ್.ಡಿ.ಪಿ.ಐ ಖಂಡನೆ

July 10, 2020
10:39 PM

ಸುಳ್ಯ: ತಾಲೂಕಿನಲ್ಲಿ ದಿನಕಳೆದಂತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ನರ್ಸ್ ಗಳಿಗೂ ವೈರಸ್ ತಗುಲಿದ ಕಾರಣ ಸರ್ಕಾರಿ ಆಸ್ಫತ್ರೆಯೆ ಸೀಲ್ ಡೌನ್ ಗೆ ಒಳಗಾಗಿದೆ. ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗೂ ಡಯಾಲಿಸಿಸ್ ರೋಗಿಗಳ ಬವಣೆಯನ್ನು ಆಲಿಸುವವರೆ ಇಲ್ಲದಂತಾಗಿದೆ. ಕೊರೋನಾ ನಿಯಂತ್ರಣಕ್ಕೆ ಮತ್ತು ಆಸ್ಪತ್ರೆ ಸೀಲ್ ಡೌನ್ ಆದ ಕಾರಣ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕಿದ್ದ ಕ್ಷೇತ್ರದ ಶಾಸಕರು ಹಾಗು ಸ್ಥಳೀಯಾಡಳಿತಗಳು ಇದಕ್ಕೂ ತಮಗೂ ಸಂಬಂದವೇ ಇಲ್ಲದಂತೆ ವರ್ತಿಸಿ ಮೌನ ವಹಿಸಿರುವುದು ಖಂಡನೀಯವಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ಕಲಾಂ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಮುಖವಾಗಿ ಡಯಾಲಿಸಿಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಸುಳ್ಯದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ ಅವರು
ಆಸ್ಪತ್ರೆ ಸೀಲ್ ಡೌನ್ ಆಗಿರುವ ಕಾರಣ ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿದ ಹಲವು ಮಂದಿ ಸಾರ್ವಜನಿಕರು ಹಾಗು ರೋಗಿಗಳು ಭಯದಿಂದ ಕಾಲ ಕಳೆಯುವ ಪರಿಸ್ಥಿತಿ ಬಂದಿದೆ. ಜನಸಾಮಾನ್ಯರಿಗೆ ಅಭಯ ನೀಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸ್ಥಳೀಯ ಶಾಸಕರು,ನಗರ ಪಂಚಾಯತ್ ಆಡಳಿತ, ತಾಲೂಕು ಪಂಚಾಯತ್ ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ತುಟಿ ಬಿಚ್ಚದೆ ಮೌನ ವಹಿಸಿರುವುದು ಜನಸಾಮಾನ್ಯರನ್ನು ಇನ್ನಷ್ಟು ಭಯಗೊಳ್ಳುವಂತೆ ಮಾಡಿದೆ. ಆದ್ದರಿಂದ ಇನ್ನಾದರು ಸಂಬಂಧಪಟ್ಟ ಎಲ್ಲಾ ಜನಪ್ರತಿನಿದಿಗಳು ಅಧಿಕಾರಿಗಳು ಈ ಬಗ್ಗೆ ಕಾರ್ಯಪ್ರವ್ರತರಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror