ಸಾಹಿತ್ಯ

ಡಾ. ಅನುರಾಧಾ ಕುರುಂಜಿಯವರ “ನುಡಿಯೊಳಗೊಂದಾಗಿ ನಡೆ” ಕೃತಿ ಅನಾವರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರಂಜಿ ಅವರ ಪಿ ಹೆಚ್.ಡಿ ಮಹಾ ಪ್ರಬಂಧದ ಕೃತಿ ರೂಪ “ನುಡಿಯೊಳಗೊಂದಾಗಿ ನಡೆ” ಇತ್ತೀಚೆಗೆ ಅನಾವರಣಗೊಂಡಿತು.

Advertisement
Advertisement

ಸುಳ್ಯದ ಅಚಲ ಪ್ರಕಾಶನವು ಹೊರತಂದ ಈ ಕೃತಿಯನ್ನು ಅರಂಬೂರು ಸರಳಿಕುಂಜದಲ್ಲಿ ನೂತನವಾಗಿ ನಿರ್ಮಿಸಿದ “ವಿಕಸನ” ದ ಗೃಹ ಪ್ರವೇಶದ ಸಂದರ್ಭದಲ್ಲಿ ಅಕಾಡೆಮಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅನಾವರಣಗೊಳಿಸಿ ಮಾತನಾಡಿ ‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಜ್ಞಾನಾಭಿವೃದ್ಧಿ ಸಾಧ್ಯ, ಆ ನಿಟ್ಟಿನಲ್ಲಿ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಆರಂಭದಲ್ಲಿ ಶುಭಾಶಂಸನೆಗೈದ ಪುರೋಹಿತ ನಾಗರಾಜ ಭಟ್ಟರು ‘ಶ್ರೀ ಲಕ್ಷ್ಮಿಯೊಂದಿಗೆ ಶ್ರೀ ಸರಸ್ವತಿಯ ಆರಾಧನೆಯನ್ನು ನಡೆಸುವ ಕಾರ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಪಿಹೆಚ್.ಡಿ ಮಾರ್ಗದರ್ಶಕ ಡಾ. ಮಾಧವ ಪೆರಾಜೆ ಮಾತನಾಡಿ ‘ನಿರಂಜನರು ಸುಳ್ಯದ ಸುಪ್ರಸಿದ್ದ ಸಾಹಿತಿಯಾಗಿದ್ದು ಅಂತಾರಾಷ್ಟ್ರೀಯ ಮಟ್ಟದ ಸಾಹಿತಿ ಎಂದು ಗುರುತಿಸಿಕೊಂಡವರು. ಅವರ ಬಗ್ಗೆ ಅಧ್ಯಯನಗಳು ನಡೆದದ್ದೇ ಕಡಿಮೆ. ಆ ನಿಟ್ಟಿನಲ್ಲಿ ಈ ಕೃತಿ ಅವರ ಬದುಕು ಹಾಗೂ ಸಾಹಿತ್ಯದ ಸಂಪೂರ್ಣ ಪರಿಚಯ ಮಾಡಿಕೊಡಲು ಸಹಕಾರಿಯಾಗಲಿದೆ ಎಂದರು.

ವೇದಿಕೆಯಲ್ಲಿ ಕುರುಂಜಿ ಪದ್ಮಯ್ಯ ಗೌಡ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಅಡ್ತಲೆ ಹಾಗೂ ಅಚಲ ಪ್ರಕಾಶನದ ಅಧ್ಯಕ್ಷ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು. ಲೇಖಕಿ ಡಾ. ಅನುರಾಧಾ ಕುರುಂಜಿ ಕೃತಿ ಹೊರತರಲು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದನಾರ್ಪಣೆಗೈದರು.

Advertisement

ವಿಜೇತ್ ಶಿರ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

7 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago