ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರಂಜಿ ಅವರ ಪಿ ಹೆಚ್.ಡಿ ಮಹಾ ಪ್ರಬಂಧದ ಕೃತಿ ರೂಪ “ನುಡಿಯೊಳಗೊಂದಾಗಿ ನಡೆ” ಇತ್ತೀಚೆಗೆ ಅನಾವರಣಗೊಂಡಿತು.
ಸುಳ್ಯದ ಅಚಲ ಪ್ರಕಾಶನವು ಹೊರತಂದ ಈ ಕೃತಿಯನ್ನು ಅರಂಬೂರು ಸರಳಿಕುಂಜದಲ್ಲಿ ನೂತನವಾಗಿ ನಿರ್ಮಿಸಿದ “ವಿಕಸನ” ದ ಗೃಹ ಪ್ರವೇಶದ ಸಂದರ್ಭದಲ್ಲಿ ಅಕಾಡೆಮಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅನಾವರಣಗೊಳಿಸಿ ಮಾತನಾಡಿ ‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಜ್ಞಾನಾಭಿವೃದ್ಧಿ ಸಾಧ್ಯ, ಆ ನಿಟ್ಟಿನಲ್ಲಿ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಆರಂಭದಲ್ಲಿ ಶುಭಾಶಂಸನೆಗೈದ ಪುರೋಹಿತ ನಾಗರಾಜ ಭಟ್ಟರು ‘ಶ್ರೀ ಲಕ್ಷ್ಮಿಯೊಂದಿಗೆ ಶ್ರೀ ಸರಸ್ವತಿಯ ಆರಾಧನೆಯನ್ನು ನಡೆಸುವ ಕಾರ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಪಿಹೆಚ್.ಡಿ ಮಾರ್ಗದರ್ಶಕ ಡಾ. ಮಾಧವ ಪೆರಾಜೆ ಮಾತನಾಡಿ ‘ನಿರಂಜನರು ಸುಳ್ಯದ ಸುಪ್ರಸಿದ್ದ ಸಾಹಿತಿಯಾಗಿದ್ದು ಅಂತಾರಾಷ್ಟ್ರೀಯ ಮಟ್ಟದ ಸಾಹಿತಿ ಎಂದು ಗುರುತಿಸಿಕೊಂಡವರು. ಅವರ ಬಗ್ಗೆ ಅಧ್ಯಯನಗಳು ನಡೆದದ್ದೇ ಕಡಿಮೆ. ಆ ನಿಟ್ಟಿನಲ್ಲಿ ಈ ಕೃತಿ ಅವರ ಬದುಕು ಹಾಗೂ ಸಾಹಿತ್ಯದ ಸಂಪೂರ್ಣ ಪರಿಚಯ ಮಾಡಿಕೊಡಲು ಸಹಕಾರಿಯಾಗಲಿದೆ ಎಂದರು.
ವೇದಿಕೆಯಲ್ಲಿ ಕುರುಂಜಿ ಪದ್ಮಯ್ಯ ಗೌಡ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಅಡ್ತಲೆ ಹಾಗೂ ಅಚಲ ಪ್ರಕಾಶನದ ಅಧ್ಯಕ್ಷ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು. ಲೇಖಕಿ ಡಾ. ಅನುರಾಧಾ ಕುರುಂಜಿ ಕೃತಿ ಹೊರತರಲು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದನಾರ್ಪಣೆಗೈದರು.
ವಿಜೇತ್ ಶಿರ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…