Advertisement
ಸಾಹಿತ್ಯ

ಡಾ. ಅನುರಾಧಾ ಕುರುಂಜಿಯವರ “ನುಡಿಯೊಳಗೊಂದಾಗಿ ನಡೆ” ಕೃತಿ ಅನಾವರಣ

Share

ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರಂಜಿ ಅವರ ಪಿ ಹೆಚ್.ಡಿ ಮಹಾ ಪ್ರಬಂಧದ ಕೃತಿ ರೂಪ “ನುಡಿಯೊಳಗೊಂದಾಗಿ ನಡೆ” ಇತ್ತೀಚೆಗೆ ಅನಾವರಣಗೊಂಡಿತು.

ಸುಳ್ಯದ ಅಚಲ ಪ್ರಕಾಶನವು ಹೊರತಂದ ಈ ಕೃತಿಯನ್ನು ಅರಂಬೂರು ಸರಳಿಕುಂಜದಲ್ಲಿ ನೂತನವಾಗಿ ನಿರ್ಮಿಸಿದ “ವಿಕಸನ” ದ ಗೃಹ ಪ್ರವೇಶದ ಸಂದರ್ಭದಲ್ಲಿ ಅಕಾಡೆಮಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅನಾವರಣಗೊಳಿಸಿ ಮಾತನಾಡಿ ‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಜ್ಞಾನಾಭಿವೃದ್ಧಿ ಸಾಧ್ಯ, ಆ ನಿಟ್ಟಿನಲ್ಲಿ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಆರಂಭದಲ್ಲಿ ಶುಭಾಶಂಸನೆಗೈದ ಪುರೋಹಿತ ನಾಗರಾಜ ಭಟ್ಟರು ‘ಶ್ರೀ ಲಕ್ಷ್ಮಿಯೊಂದಿಗೆ ಶ್ರೀ ಸರಸ್ವತಿಯ ಆರಾಧನೆಯನ್ನು ನಡೆಸುವ ಕಾರ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಪಿಹೆಚ್.ಡಿ ಮಾರ್ಗದರ್ಶಕ ಡಾ. ಮಾಧವ ಪೆರಾಜೆ ಮಾತನಾಡಿ ‘ನಿರಂಜನರು ಸುಳ್ಯದ ಸುಪ್ರಸಿದ್ದ ಸಾಹಿತಿಯಾಗಿದ್ದು ಅಂತಾರಾಷ್ಟ್ರೀಯ ಮಟ್ಟದ ಸಾಹಿತಿ ಎಂದು ಗುರುತಿಸಿಕೊಂಡವರು. ಅವರ ಬಗ್ಗೆ ಅಧ್ಯಯನಗಳು ನಡೆದದ್ದೇ ಕಡಿಮೆ. ಆ ನಿಟ್ಟಿನಲ್ಲಿ ಈ ಕೃತಿ ಅವರ ಬದುಕು ಹಾಗೂ ಸಾಹಿತ್ಯದ ಸಂಪೂರ್ಣ ಪರಿಚಯ ಮಾಡಿಕೊಡಲು ಸಹಕಾರಿಯಾಗಲಿದೆ ಎಂದರು.

ವೇದಿಕೆಯಲ್ಲಿ ಕುರುಂಜಿ ಪದ್ಮಯ್ಯ ಗೌಡ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಅಡ್ತಲೆ ಹಾಗೂ ಅಚಲ ಪ್ರಕಾಶನದ ಅಧ್ಯಕ್ಷ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು. ಲೇಖಕಿ ಡಾ. ಅನುರಾಧಾ ಕುರುಂಜಿ ಕೃತಿ ಹೊರತರಲು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದನಾರ್ಪಣೆಗೈದರು.

ವಿಜೇತ್ ಶಿರ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

8 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

10 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

14 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

1 day ago