Advertisement
ಸಾಹಿತ್ಯ

ಡಾ. ಅನುರಾಧಾ ಕುರುಂಜಿಯವರ “ನುಡಿಯೊಳಗೊಂದಾಗಿ ನಡೆ” ಕೃತಿ ಅನಾವರಣ

Share

ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರಂಜಿ ಅವರ ಪಿ ಹೆಚ್.ಡಿ ಮಹಾ ಪ್ರಬಂಧದ ಕೃತಿ ರೂಪ “ನುಡಿಯೊಳಗೊಂದಾಗಿ ನಡೆ” ಇತ್ತೀಚೆಗೆ ಅನಾವರಣಗೊಂಡಿತು.

ಸುಳ್ಯದ ಅಚಲ ಪ್ರಕಾಶನವು ಹೊರತಂದ ಈ ಕೃತಿಯನ್ನು ಅರಂಬೂರು ಸರಳಿಕುಂಜದಲ್ಲಿ ನೂತನವಾಗಿ ನಿರ್ಮಿಸಿದ “ವಿಕಸನ” ದ ಗೃಹ ಪ್ರವೇಶದ ಸಂದರ್ಭದಲ್ಲಿ ಅಕಾಡೆಮಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅನಾವರಣಗೊಳಿಸಿ ಮಾತನಾಡಿ ‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಜ್ಞಾನಾಭಿವೃದ್ಧಿ ಸಾಧ್ಯ, ಆ ನಿಟ್ಟಿನಲ್ಲಿ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಆರಂಭದಲ್ಲಿ ಶುಭಾಶಂಸನೆಗೈದ ಪುರೋಹಿತ ನಾಗರಾಜ ಭಟ್ಟರು ‘ಶ್ರೀ ಲಕ್ಷ್ಮಿಯೊಂದಿಗೆ ಶ್ರೀ ಸರಸ್ವತಿಯ ಆರಾಧನೆಯನ್ನು ನಡೆಸುವ ಕಾರ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಪಿಹೆಚ್.ಡಿ ಮಾರ್ಗದರ್ಶಕ ಡಾ. ಮಾಧವ ಪೆರಾಜೆ ಮಾತನಾಡಿ ‘ನಿರಂಜನರು ಸುಳ್ಯದ ಸುಪ್ರಸಿದ್ದ ಸಾಹಿತಿಯಾಗಿದ್ದು ಅಂತಾರಾಷ್ಟ್ರೀಯ ಮಟ್ಟದ ಸಾಹಿತಿ ಎಂದು ಗುರುತಿಸಿಕೊಂಡವರು. ಅವರ ಬಗ್ಗೆ ಅಧ್ಯಯನಗಳು ನಡೆದದ್ದೇ ಕಡಿಮೆ. ಆ ನಿಟ್ಟಿನಲ್ಲಿ ಈ ಕೃತಿ ಅವರ ಬದುಕು ಹಾಗೂ ಸಾಹಿತ್ಯದ ಸಂಪೂರ್ಣ ಪರಿಚಯ ಮಾಡಿಕೊಡಲು ಸಹಕಾರಿಯಾಗಲಿದೆ ಎಂದರು.

ವೇದಿಕೆಯಲ್ಲಿ ಕುರುಂಜಿ ಪದ್ಮಯ್ಯ ಗೌಡ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಅಡ್ತಲೆ ಹಾಗೂ ಅಚಲ ಪ್ರಕಾಶನದ ಅಧ್ಯಕ್ಷ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು. ಲೇಖಕಿ ಡಾ. ಅನುರಾಧಾ ಕುರುಂಜಿ ಕೃತಿ ಹೊರತರಲು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದನಾರ್ಪಣೆಗೈದರು.

ವಿಜೇತ್ ಶಿರ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

6 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

13 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

13 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

20 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

21 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago