ಸುಳ್ಯ:ರಾಜ್ಯ ಸರಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿತವಾಗಿದ್ದು , ಸುಳ್ಯದವರಾದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಡಾ.ಕೊಳಂಬೆ ಚಿದಾನಂದ ಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಕನ್ನಡ ಕವಿ ಚೊಕ್ಕಾಡಿಯ ದಿ.ಕೊಳಂಬೆ ಪುಟ್ಟಣ್ಣ ಗೌಡರ ಪುತ್ರರಾಗಿರುವ ಡಾ.ಕೆ.ಚಿದಾನಂದ ಗೌಡರು ಹಲವಾರು ವರ್ಷಗಳ ಕಾಲ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಕುಲಪತಿಯಾಗಿ ನಿವೃತ್ತರಾದವರು. ಸಾಹಿತಿಯೂ ಆಗಿರುವ ಇವರ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ರಾಷ್ಟ್ರಕವಿ ಕುವೆಂಪು ರವರ ಪುತ್ರಿ ತಾರಿಣಿಯವರನ್ನು ವಿವಾಹವಾಗಿರುವ ಡಾ.ಕೆ.ಚಿದಾನಂದ ಗೌಡರು ಮೈಸೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರಾಗಿರುವ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…