ಸುಳ್ಯ:ರಾಜ್ಯ ಸರಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿತವಾಗಿದ್ದು , ಸುಳ್ಯದವರಾದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಡಾ.ಕೊಳಂಬೆ ಚಿದಾನಂದ ಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಕನ್ನಡ ಕವಿ ಚೊಕ್ಕಾಡಿಯ ದಿ.ಕೊಳಂಬೆ ಪುಟ್ಟಣ್ಣ ಗೌಡರ ಪುತ್ರರಾಗಿರುವ ಡಾ.ಕೆ.ಚಿದಾನಂದ ಗೌಡರು ಹಲವಾರು ವರ್ಷಗಳ ಕಾಲ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಕುಲಪತಿಯಾಗಿ ನಿವೃತ್ತರಾದವರು. ಸಾಹಿತಿಯೂ ಆಗಿರುವ ಇವರ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ರಾಷ್ಟ್ರಕವಿ ಕುವೆಂಪು ರವರ ಪುತ್ರಿ ತಾರಿಣಿಯವರನ್ನು ವಿವಾಹವಾಗಿರುವ ಡಾ.ಕೆ.ಚಿದಾನಂದ ಗೌಡರು ಮೈಸೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರಾಗಿರುವ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…