ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರಿಗೆ ಮಾನವಿಕ ವಿಭಾಗದಿಂದ ಬೀಳ್ಕೊಡುಗೆ

January 27, 2020
6:08 PM

ಪುತ್ತೂರು: ಇಂದಿನ ಕಾಲದಲ್ಲಿ ಜೀವನಕ್ಕಾಗಿ ಸಂಬಂಧಗಳನ್ನು ಬೆಳೆಸುತ್ತಾರೆ. ಇದರಿಂದಾಗಿ ಪ್ರತಿಯೊಬ್ಬರು ಬದುಕಿನಲ್ಲಿ ಬಂದು ಹೋಗುತ್ತಾರೆ, ಆದರೆ ನಾವು ಜೀವಂತಿಕೆಯುಳ್ಳ ಸಂಬಂಧಗಳನ್ನು ಬೆಳೆಸಿದಾಗ ಮಾತ್ರ ಜೀವನಕ್ಕೆ ಒಂದು ಅರ್ಥ ಸಿಗುವುದು ಎನ್ನುವುದನ್ನು ಅರಿತುಕೊಳ್ಳಬೇಕಾಗಿದೆ. ಪರಸ್ಪರ ಬಾಂಧವ್ಯವನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡಾಗ ನಮ್ಮ ಬದುಕು ಸುಂದರ ರೀತಿಯಲ್ಲಿ ಬೆಳೆದುಕೊಳ್ಳುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

Advertisement
Advertisement

ಅವರು ಇಲ್ಲಿನ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಆಯೋಜಿಸಲಾದ ಪ್ರಾಂಶುಪಾಲರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ತಮ್ಮ 37 ವರ್ಷದ ಅನುಭವಗಳನ್ನು ಶನಿವಾರ ಹಂಚಿಕೊಂಡರು. ನಿವೃತ್ತಿ ಜೀವನ ಎನ್ನುವುದು ಒಂದು ಹೊಸ ಆರಂಭವಾಗಿದೆ. ಅದರಂತೆ ವೃತ್ತಿ ಜೀವನದಲ್ಲಿ ಪಡೆದುಕೊಂಡ ಅನುಭವಗಳು ಮುಂದಿನ ಜೀವನದ ದಾರಿ ದೀಪವಾಗುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ನಾವು ಕಲಿಯುತ್ತಿರುವ ವಿಷಯದ ಬಗ್ಗೆ ಕೀಳರಿಮೆಯನ್ನಿಟ್ಟುಕೊಳ್ಳಬಾರದು. ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶಗಳು ಹೆಚ್ಚಾಗಿ ತೆರೆದುಕೊಳ್ಳುತ್ತದೆ. ಅದೇ ರೀತಿ ನಾವು ನಮ್ಮನ್ನು ಪ್ರತಿ ಜೀವನದ ಸ್ಪರ್ಧೆಯಲ್ಲೂ ಸಿದ್ಧರನ್ನಾಗಿಸಿದಾಗ ಯಾವುದೇ ಸಮಸ್ಯೆಯೂ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯೂಎಸಿ ಸಂಯೋಜಕ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್. ಜಿ. ಶ್ರೀಧರ್ ಮಾತನಾಡಿ, ನಾವು ಹಿರಿಯರಿಗೆ ನೀಡುವ ಗೌರವ ನಮ್ಮ ಸಂಸ್ಕೃತಿಯನ್ನು ಹೇಳುತ್ತದೆ. ನಮ್ಮಲ್ಲಿರುವ ಜೀವನ ಮೌಲ್ಯಗಳು ನಮ್ಮನ್ನು ಬದುಕಿನುದ್ದಕ್ಕೂ ಮುನ್ನಡೆಸುತ್ತದೆ. ಒಂದು ವಿಷಯದಲ್ಲಿನ ಅರಿವನ್ನು ಜ್ಞಾನ ಎನ್ನಲು ಸಾಧ್ಯವಿಲ್ಲ. ಎಲ್ಲಾ ವಿಚಾರಗಳಲ್ಲಿನ ಅರಿವನ್ನು ಜ್ಞಾನ ಎನ್ನಲಾಗುತ್ತದೆ. ಆದದರಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಳ್ಳಲು ನಮ್ಮನ್ನು ನಾವು ತೆರೆದುಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಾಲೇಜಿನ ಇತಿಹಾಸ ವಿಭಾಗದ ಉಪನ್ಯಾಸಕಿ ವಿಜಯಲಕ್ಷ್ಮೀ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕವಿತಾ, ಕನ್ನಡ ವಿಭಾಗದ ಉಪನ್ಯಾಸಕ ಡಾ ಮನಮೋಹನ್, ಸಂಸ್ಕೃತ ವಿಭಾಗ ಉಪನ್ಯಾಸಕ ಡಾ. ಶ್ರೀಶ ಕುಮಾರ್, ಆರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ವಾಸುದೇವ, ಆಂಗ್ಲ ವಿಭಾಗದ ಉಪನ್ಯಾಸಕರಾದ ಗಣೇಶ್ ಪ್ರಸಾದ್ ಎ., ರೇಖಾ ನಾಯರ್ ಹಾಗೂ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯ ಪಿ.ಆರ್. ನಿಡ್ಪಳ್ಳಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳಾದ ಅರುಣ್ ಕುಮಾರ್, ತನುಶ್ರೀ, ಶ್ರೀಧರ್, ಗಾನವಿ, ಕವಿತಾ, ಸಾರ್ಥಕ್, ತೇಜಶ್ರೀ ತಮ್ಮ ಅನುಭವಗಳನ್ನು ಹಂಚಿಕೊಂಡರು.

Advertisement

ನಿವೃತ್ತಿ ಹೊಂದುತ್ತಿರುವ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರನ್ನು ಉಪನ್ಯಾಸಕರ ವತಿಯಿಂದ ಗೌರವ ಸಮರ್ಪಣೆ ನಡೆಯಿತು. ವಿದ್ಯಾರ್ಥಿ ಶ್ರೇಯಸ್ ಬಿಡಿಸಿದ ಚಿತ್ರವನ್ನು ಉಡುಗೊರೆಯಾಗಿ ಪ್ರಾಂಶುಪಾಲರಿಗೆ ನೀಡಿದರು. ವೇದಿಕೆಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯಕ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಚನಾ ಪ್ರಾರ್ಥಿಸಿ, ಚಾಂದನಿ ಸ್ವಾಗತಿಸಿದರು. ಸಾರ್ಥಕ್ ವಂದಿಸಿ ಆಶಾ ಸಿ. ಎಚ್. ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror