Advertisement
ಧಾರ್ಮಿಕ

ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

Share

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ತಾಲೂಕುವಾರು ಪದಾಧಿಕಾರಿಗಳ ಸಭೆಯು ಧರ್ಮಸ್ಥಳ ಕ್ಷೇತ್ರದ ವಸಂತ ಮಹಲಿನಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೇಮಾವತಿ ಹೆಗ್ಗಡೆ, ಮಾಣಿಲ ಕ್ಷೇತ್ರದ ಮೋಹನದಾಸ ಈಶ ವಿಠಲ ಸ್ವಾಮೀಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಭಜನಾ ಪರಿಷತ್ ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ ವಹಿಸಿದ್ದರು.

Advertisement
Advertisement
Advertisement
Advertisement

‘ಪರಿಷತ್ ನ ಮೂಲಕ ಗ್ರಾಮದ, ಪ್ರಾದೇಶಿಕ ಸುಭಿಕ್ಷೆಯಾಗಬೇಕು.  ಜಾತಿ, ಮತ ಭೇದವೆಂಬ ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ಭಜನಾ ಮಂದಿರಗಳು ಸ್ಥಾಪಿತವಾಗಿದೆ. ಭಜನಾ ಮಂದಿರದ ಆರೋಗ್ಯ ರಕ್ಷಣೆಯನ್ನು ಪರಿಷತ್ ಕಾಪಾಡುವಂತಾಗಬೇಕು. ಪರಿವರ್ತನೆ ಮತ್ತು ಧಾರ್ಮಿಕ ಮೌಲ್ಯದ ಉಳಿವಿಗಾಗಿ ಪ್ರೇರಣೆ ನೀಡಬೇಕು. ಆಧುನೀಕರಣದ ಸ್ವರೂಪವನ್ನು ಭಜನೆಗೆ ನೀಡಿ ಹೊಸತನದ ಭಜನೆಯಿಂದ ಯುವ ಪೀಳಿಗೆಯನ್ನು ಭಜನೆಯೆಡೆಗೆ ಆಕರ್ಷಿಸುವಂತೆ ಮಾಡಬೇಕು. ಯುವ ಪೀಳಿಗೆಯಲ್ಲಿ ಭಕ್ತಿ ಮಾರ್ಗ ಬೆಳೆಯಬೇಕು ಎಂದು ಡಾ.ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನ ನೀಡಿದರು.

Advertisement

‘ಭಜನೆಯ ಅಗಾಧವಾದ ಶಕ್ತಿಯಿಂದ ಸ್ವಸ್ಥ ಸಮಾಜ ನಿರ್ಮಾಣವಾಗುವುದು. ಭಜಕರಲ್ಲಿ ಶಿಸ್ತು, ಸಂಯಮ, ಸೌಜನ್ಯದ ಗುಣಗಳಿರಬೇಕು. ಮನ ಹಾಗೂ ಮನೆ ಪರಿವರ್ತನೆಯಾಗಲು ಭಜನೆ ಪೂರಕ ಎಂದು ಮೋಹನದಾಸ ಸ್ವಾಮೀಜಿ ತಿಳಿಸಿದರು.
‘ಸ್ವಯಂ ಇಚ್ಚೆಯಿಂದ ಭಜನೆಯಲ್ಲಿ ಪಾಲ್ಗೊಳ್ಳಬೇಕು. ಪರಿಷತ್ ನ ಮೂಲಕ ಸಾಮಾಜಿಕವಾದ ಸೇವೆಯು ಸಮಾಜಕ್ಕೆ ಅರ್ಪಣೆಯಾಗಲಿ. ದುಶ್ಚಟ ಮುಕ್ತ ಸಮಾಜ ನಿರ್ಮಾಣವಾಬೇಕು. ಭಜನೆಯಿಂದ ಬದಲಾವಣೆ ಆಗಲಿ ಎಂದು ಹೇಮಾವತಿ ಹೆಗ್ಗಡೆಯವರು ಸಂದೇಶ ನೀಡಿದರು.

ತಾಲೂಕುವಾರು ಪರಿಷತ್ ನ ಅಧ್ಯಕ್ಷರು ವರದಿಯನ್ನು ಮತ್ತು ಮುಂದಿನ ಯೋಜನೆಗಳ ವಿವರವನ್ನು ತಿಳಿಸಿದರು.
ಪರಿಷತ್ ನ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ, ಭಜನಾ ತರಬೇತುದಾರ ರಾಮಕೃಷ್ಣ ಕಾಟುಕುಕ್ಕೆ ಮತ್ತು ಪರಿಷತ್ ನ ಪದಾಧಿಕಾರಿಗಳು, ಯೋಜನಾಧಿಕಾರಿಗಳು, ಹಾಗೂ ರಾಜ್ಯದ ಬೇರೆ ಬೇರೆ ತಾಲೂಕಿನ ಪರಿಷತ್ ನ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

21 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago