ಧಾರ್ಮಿಕ

ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ತಾಲೂಕುವಾರು ಪದಾಧಿಕಾರಿಗಳ ಸಭೆಯು ಧರ್ಮಸ್ಥಳ ಕ್ಷೇತ್ರದ ವಸಂತ ಮಹಲಿನಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೇಮಾವತಿ ಹೆಗ್ಗಡೆ, ಮಾಣಿಲ ಕ್ಷೇತ್ರದ ಮೋಹನದಾಸ ಈಶ ವಿಠಲ ಸ್ವಾಮೀಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಭಜನಾ ಪರಿಷತ್ ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ ವಹಿಸಿದ್ದರು.

Advertisement
Advertisement

‘ಪರಿಷತ್ ನ ಮೂಲಕ ಗ್ರಾಮದ, ಪ್ರಾದೇಶಿಕ ಸುಭಿಕ್ಷೆಯಾಗಬೇಕು.  ಜಾತಿ, ಮತ ಭೇದವೆಂಬ ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ಭಜನಾ ಮಂದಿರಗಳು ಸ್ಥಾಪಿತವಾಗಿದೆ. ಭಜನಾ ಮಂದಿರದ ಆರೋಗ್ಯ ರಕ್ಷಣೆಯನ್ನು ಪರಿಷತ್ ಕಾಪಾಡುವಂತಾಗಬೇಕು. ಪರಿವರ್ತನೆ ಮತ್ತು ಧಾರ್ಮಿಕ ಮೌಲ್ಯದ ಉಳಿವಿಗಾಗಿ ಪ್ರೇರಣೆ ನೀಡಬೇಕು. ಆಧುನೀಕರಣದ ಸ್ವರೂಪವನ್ನು ಭಜನೆಗೆ ನೀಡಿ ಹೊಸತನದ ಭಜನೆಯಿಂದ ಯುವ ಪೀಳಿಗೆಯನ್ನು ಭಜನೆಯೆಡೆಗೆ ಆಕರ್ಷಿಸುವಂತೆ ಮಾಡಬೇಕು. ಯುವ ಪೀಳಿಗೆಯಲ್ಲಿ ಭಕ್ತಿ ಮಾರ್ಗ ಬೆಳೆಯಬೇಕು ಎಂದು ಡಾ.ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನ ನೀಡಿದರು.

‘ಭಜನೆಯ ಅಗಾಧವಾದ ಶಕ್ತಿಯಿಂದ ಸ್ವಸ್ಥ ಸಮಾಜ ನಿರ್ಮಾಣವಾಗುವುದು. ಭಜಕರಲ್ಲಿ ಶಿಸ್ತು, ಸಂಯಮ, ಸೌಜನ್ಯದ ಗುಣಗಳಿರಬೇಕು. ಮನ ಹಾಗೂ ಮನೆ ಪರಿವರ್ತನೆಯಾಗಲು ಭಜನೆ ಪೂರಕ ಎಂದು ಮೋಹನದಾಸ ಸ್ವಾಮೀಜಿ ತಿಳಿಸಿದರು.
‘ಸ್ವಯಂ ಇಚ್ಚೆಯಿಂದ ಭಜನೆಯಲ್ಲಿ ಪಾಲ್ಗೊಳ್ಳಬೇಕು. ಪರಿಷತ್ ನ ಮೂಲಕ ಸಾಮಾಜಿಕವಾದ ಸೇವೆಯು ಸಮಾಜಕ್ಕೆ ಅರ್ಪಣೆಯಾಗಲಿ. ದುಶ್ಚಟ ಮುಕ್ತ ಸಮಾಜ ನಿರ್ಮಾಣವಾಬೇಕು. ಭಜನೆಯಿಂದ ಬದಲಾವಣೆ ಆಗಲಿ ಎಂದು ಹೇಮಾವತಿ ಹೆಗ್ಗಡೆಯವರು ಸಂದೇಶ ನೀಡಿದರು.

ತಾಲೂಕುವಾರು ಪರಿಷತ್ ನ ಅಧ್ಯಕ್ಷರು ವರದಿಯನ್ನು ಮತ್ತು ಮುಂದಿನ ಯೋಜನೆಗಳ ವಿವರವನ್ನು ತಿಳಿಸಿದರು.
ಪರಿಷತ್ ನ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ, ಭಜನಾ ತರಬೇತುದಾರ ರಾಮಕೃಷ್ಣ ಕಾಟುಕುಕ್ಕೆ ಮತ್ತು ಪರಿಷತ್ ನ ಪದಾಧಿಕಾರಿಗಳು, ಯೋಜನಾಧಿಕಾರಿಗಳು, ಹಾಗೂ ರಾಜ್ಯದ ಬೇರೆ ಬೇರೆ ತಾಲೂಕಿನ ಪರಿಷತ್ ನ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

3 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

8 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

10 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

10 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

10 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

11 hours ago