ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.
ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…