ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.
ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…