ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.
ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…