ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.
ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…