ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ ನಡೆಯಲಿದೆ.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸುವುದಾಗಿ ಅವರು ಹೇಳಿದರು.
ಡಿಕೆಶಿ ಬಂಧನ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆದಿದೆ. ಸಮುದಾಯದ ನಾಯಕರಿಗೆ ಸಂಕಷ್ಟ ಬಂದಾಗ ಸಮುದಾಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ದಿನೇಶ್ ಮಡ್ತಿಲ ಉಪಸ್ಥಿತರಿದ್ದರು.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…