Advertisement
ಸುದ್ದಿಗಳು

ಡಿವಿ ಬಳಿಕ ಮತ್ತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಲಿದ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

Share

ಸುಳ್ಯ: ವಿಧಾನಸಭಾ ಕ್ಷೇತ್ರದ ಮೂರು ಮಂದಿ ಸಂಸದರಾಗಿರುವ ಹೆಮ್ಮೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವೂ ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಲಿದು ಬಂದಿದೆ.

ನಿರೀಕ್ಷೆಯಂತೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಡಿ.ವಿ.ಸದಾನಂದ ಗೌಡರ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರದವರು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಅಲಂಕರಿಸುತ್ತಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಂಸದರಾಗಿ ಕಾರ್ಯನಿರ್ವಹಿಸುವ ಜೊತೆ ಜೊತೆಗೆ ಕೇರಳ ಬಿಜೆಪಿಯ ಸಹಪ್ರಬಾರಿಯಾಗಿ ಪಕ್ಷ ಸಂಘಟನೆಯಲ್ಲಿಯೂ ಸಕ್ರೀಯರಾಗಿದ್ದಾರೆ. ಇದೀಗ ರಾಜ್ಯಾಧ್ಯಕ್ಷರಾಗುವ ಮೂಲಕ ಮಹತ್ತರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಸುಳ್ಯ ವಿಧಾನಸಭಾ ಮೂಲದವರಾದ ನಳಿನ್ ಕುಮಾರ್ ಕಟೀಲ್, ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸಂಸದರಾಗಿದ್ದಾರೆ. ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಸದಾನಂದ ಗೌಡರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಎರಡನೇ ಅವಧಿಗೆ ಕೇಂದ್ರ ಸಚಿವರಾಗಿದ್ದಾರೆ. ಇದೀಗ ಸದಾನಂದ ಗೌಡರ ಬಳಿಕ ನಳಿನ್ ಮೂಲಕ ಜಿಲ್ಲೆಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದು ಬಂದಿದೆ. ಇದು ಜಿಲ್ಲೆಯ ಬಿಜೆಪಿಗೆ ಇನ್ನಷ್ಟು ಹುರುಪು ತುಂಬಲಿದೆ ಎಂದು ವಿಶ್ಲೇಷಿಸಲಾಗುತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, ಆರು ಬಾರಿ ಶಾಸಕರಾದ ಅಂಗಾರರಿಗೆ ಮಂತ್ರಿ ಗಿರಿ ನೀಡಿಲ್ಲ ಎಂಬ ಅಸಮಾಧಾನ ಹೊಗೆಯಾಡುತ್ತಿರುವುದರ ಮಧ್ಯೆ ಹೈಕಮಾಂಡ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷತೆಯ ಪಟ್ಟ ನೀಡಿದೆ ಎಂಬುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 hour ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

3 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

9 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

9 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

16 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

17 hours ago