Advertisement
ಸುದ್ದಿಗಳು

ಡಿವಿ ಬಳಿಕ ಮತ್ತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಲಿದ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

Share

ಸುಳ್ಯ: ವಿಧಾನಸಭಾ ಕ್ಷೇತ್ರದ ಮೂರು ಮಂದಿ ಸಂಸದರಾಗಿರುವ ಹೆಮ್ಮೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವೂ ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಲಿದು ಬಂದಿದೆ.

ನಿರೀಕ್ಷೆಯಂತೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಡಿ.ವಿ.ಸದಾನಂದ ಗೌಡರ ಬಳಿಕ ಸುಳ್ಯ ವಿಧಾನಸಭಾ ಕ್ಷೇತ್ರದವರು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಅಲಂಕರಿಸುತ್ತಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಂಸದರಾಗಿ ಕಾರ್ಯನಿರ್ವಹಿಸುವ ಜೊತೆ ಜೊತೆಗೆ ಕೇರಳ ಬಿಜೆಪಿಯ ಸಹಪ್ರಬಾರಿಯಾಗಿ ಪಕ್ಷ ಸಂಘಟನೆಯಲ್ಲಿಯೂ ಸಕ್ರೀಯರಾಗಿದ್ದಾರೆ. ಇದೀಗ ರಾಜ್ಯಾಧ್ಯಕ್ಷರಾಗುವ ಮೂಲಕ ಮಹತ್ತರ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಸುಳ್ಯ ವಿಧಾನಸಭಾ ಮೂಲದವರಾದ ನಳಿನ್ ಕುಮಾರ್ ಕಟೀಲ್, ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸಂಸದರಾಗಿದ್ದಾರೆ. ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಸದಾನಂದ ಗೌಡರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಎರಡನೇ ಅವಧಿಗೆ ಕೇಂದ್ರ ಸಚಿವರಾಗಿದ್ದಾರೆ. ಇದೀಗ ಸದಾನಂದ ಗೌಡರ ಬಳಿಕ ನಳಿನ್ ಮೂಲಕ ಜಿಲ್ಲೆಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದು ಬಂದಿದೆ. ಇದು ಜಿಲ್ಲೆಯ ಬಿಜೆಪಿಗೆ ಇನ್ನಷ್ಟು ಹುರುಪು ತುಂಬಲಿದೆ ಎಂದು ವಿಶ್ಲೇಷಿಸಲಾಗುತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, ಆರು ಬಾರಿ ಶಾಸಕರಾದ ಅಂಗಾರರಿಗೆ ಮಂತ್ರಿ ಗಿರಿ ನೀಡಿಲ್ಲ ಎಂಬ ಅಸಮಾಧಾನ ಹೊಗೆಯಾಡುತ್ತಿರುವುದರ ಮಧ್ಯೆ ಹೈಕಮಾಂಡ್ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷತೆಯ ಪಟ್ಟ ನೀಡಿದೆ ಎಂಬುದು ವಿಶೇಷ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago