Advertisement
ಸುದ್ದಿಗಳು

ಡಿಸಿಸಿ ಚುನಾವಣೆ : ಅಡ್ಡಮತದಾನದ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ?

Share

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳಿಂದ ಅಡ್ಡಮತದಾನ ನಡೆದರೂ ಯಾವುದೇ ಕ್ರಮ ಆಗದಿರುವ ಬಗ್ಗೆ ಸುಳ್ಯದ ಬಿಜೆಪಿಯಲ್ಲಿ ಈಗ ಚರ್ಚೆ ಹೆಚ್ಚಾಗಿದೆ. ಇದೀಗ ಬಿಜೆಪಿಯು ಅಡ್ಡಮತದಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ.

ಹೇಗೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಪ್ರಮುಖರ  ಹಾಗೂ ಸಂಘಪರಿವಾರದ ಪ್ರಮುಖರ ಸಭೆ ನಡೆದಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಹಾಗೂ ಸಂಘಪರಿವಾರದ ಭದ್ರಕೋಟೆಯಾದ ಸುಳ್ಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ  ಸಹಕಾರಭಾರತಿ ಬಹುಮತ ಇದ್ದರೂ ಸೋಲು ಕಂಡಿದೆ.

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಯಾಗಿ ವೆಂಕಟ್ ದಂಬೆಕೋಡಿ ಹಾಗೂ ಸೌಹಾರ್ದ ಸಹಕಾರಿ ಅಭ್ಯರ್ಥಿಯಾಗಿ ಕೆ ಎಸ್ ದೇವರಾಜ್ ಸ್ಫರ್ಧೆ ಮಾಡಿದ್ದರು. ಸುಳ್ಯ ಕ್ಷೇತ್ರದಲ್ಲಿ ಸಹಕಾರ ಭಾರತಿ ಮೇಲುಗೈ ಹೊಂದಿತ್ತು. ಸಹಜವಾಗಿಯೇ ಸಹಕಾರ ಭಾರತಿ ಗೆಲ್ಲುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ 7 ಮಂದಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸದಸ್ಯರು ಅಡ್ಡಮತದಾನ ಮಾಡಿದ ಪರಿಣಾಮವಾಗಿ ಕೆ ಎಸ್ ದೇವರಾಜ್   ಅವರು ವೆಂಕಟ್ ದಂಬೆಕೋಡಿ ವಿರುದ್ಧ ಗೆಲುವು ಸಾಧಿಸಿದ್ದರು.

ಈ ಅಡ್ಡಮತದಾನದ ಬಗ್ಗೆ  ಬಿಜೆಪಿ ಕಾರ್ಯಕರ್ತರೊಳಗೆ ವ್ಯಾಪಕ ಚರ್ಚೆ ಹಾಗೂ ಟೀಕೆ ವ್ಯಕ್ತವಾಗಿತ್ತು.  ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮವಾಗಬೇಕು ಎಂಬ ಒತ್ತಾಯ ಅಂದೇ ಕೇಳಿಬಂದಿತ್ತು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಬಿಜೆಪಿ ಹಾಗೂ ಸಹಕಾರ ಭಾರತಿ ಮೌನವಾಗಿತ್ತು.  ಪುತ್ತೂರು ಹಾಗೂ ಬಂಟ್ವಾಳದಲ್ಲಿ  ಅಡ್ಡಮತದಾನ ಮಾಡಿದವರ ಬಗ್ಗೆ ಸ್ಪಷ್ಠ ಮಾಹಿತಿ ಇದ್ದ ಕಾರಣ ಸಹಕಾರ ಭಾರತಿಯಿಂದ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಸುಳ್ಯದಲ್ಲಿ ಚುನಾವಣೆಯ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದರು.

ಇದೀಗ ಚುನಾವಣೆಯ ಬಳಿಕ ಮತ್ತೆ ಚರ್ಚೆ ಆರಂಭವಾದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಸಂಘಪರಿವಾರದ ಪ್ರಮುಖರು ಸಭೆ ನಡೆಸಿದ್ದು , ಅಡ್ಡಮತದಾನ ಮಾಡಿದವರು ಪಕ್ಷದ ಹಿರಿಯ ಬಳಿ ಒಪ್ಪಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಯಾರೊಬ್ಬರೂ ಒಪ್ಪಿಕೊಂಡಿಲ್ಲ.

ಹೀಗಾಗಿ ಮತದಾನ ಮಾಡಿದ ಎಲ್ಲರೂ ಪಕ್ಷದ ಹಾಗೂ ಸಹಕಾರ ಭಾರತಿಯ ಎಲ್ಲಾ ಹುದ್ದೆಗಳಿಗೆ ರಾಜಿನಾಮೆ ನೀಡುವ ಬಗ್ಗೆ ಅಭಿಪ್ರಾಯ ಹೊಂದಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಈಗಾಗಲೇ ಅಡ್ಡಮತದಾನ ಮಾಡಿರುವ ಬಗ್ಗೆ ಹಲವರಲ್ಲಿ ಹೇಳಿದ್ದು, ಉಳಿದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲವಾದ್ದರಿಂದ ಪಕ್ಷದ ಪ್ರಮುಖರು ಎಲ್ಲರೂ ರಾಜಿನಾಮೆ ನೀಡುವಂತೆ ಈಗ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂತೂ ವಾರದೊಳಗೆ ಅಡ್ಡ ಮತದಾನ ಮಾಡಿದವರ ವಿರುದ್ಧ ಬಿಜೆಪಿ ಕ್ರಮಗೊಳ್ಳಲಿದೆಯೇ ಎಂಬ ಚರ್ಚೆ ಈಗ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago