ಸುದ್ದಿಗಳು

ಡಿಸಿಸಿ ಬ್ಯಾಂಕ್ ಅಡ್ಡಮತದಾನ : ಪ್ರತಿನಿಧಿಗಳಿಗೆ ಸಹಕಾರಿ ಸಂಘದ ಚುನಾವಣಾ ಸ್ಪರ್ಧೆಗೆ ಅವಕಾಶ ಇಲ್ಲ – ಬಿಜೆಪಿ ಸ್ಪಷ್ಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳು ಅಡ್ಡಮತದಾನ ಮಾಡಿ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದು ಪಕ್ಷಕ್ಕೆ ತೀವ್ರ ಮುಜುಗರ ತಂದಿತ್ತು. ಈ ಹಿನ್ನಲೆಯಲ್ಲಿ ಪ್ರತಿನಿಧಿಗಳಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆದರೆ ಸರಿಯಾದ ಸಮಯಕ್ಕೆ ರಾಜಿನಾಮೆ ಸಲ್ಲಿಸದವರಿಗೆ ಈ ಬಾರಿಯ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡಮತದಾನ ಮಾಡಿದ ಏಳು ಮಂದಿ ಯಾರು ಎಂದು ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆರು ಮಂದಿ ಸೂಕ್ತ ಸಮಯಕ್ಕೆ ರಾಜಿನಾಮೆ ನೀಡಿದ್ದರು. ಗ್ರಾಮ ಸಮಿತಿ ಒಪ್ಪಿದಲ್ಲಿ ಈ ಆರು ಮಂದಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗುವುದು. ಉಳಿದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಪಕ್ಷದ ಸೂಚನೆಯನ್ನು ತಿರಸ್ಕರಿಸಿದವರಿಗೆ ಯಾವುದೇ ಕಾರಣಕ್ಕೂ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಇರುವುದಿಲ್ಲ ಎಂದು ಹೇಳಿದರು. ಚುನಾವಣೆಯಲ್ಲಿ ಹಿನ್ನಡೆ ಆದರೂ ತೊಂದರೆ ಇಲ್ಲ, ಆದರೆ ಪಕ್ಷದ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ಕೆಲಸ ಮಾಡಿದವರನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಮುಖಂಡ ಸುದ್ದಿಗೋಷ್ಠಿಯಲ್ಲಿ ಎ.ವಿ.ತೀರ್ಥರಾಮ, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಸಹಕಾರ ಭಾರತಿ ಸುಳ್ಯ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್ ದೊಡ್ಡತೋಟ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

3 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

4 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

7 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

11 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

12 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

20 hours ago