ಸುಳ್ಯ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳು ಅಡ್ಡಮತದಾನ ಮಾಡಿ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದು ಪಕ್ಷಕ್ಕೆ ತೀವ್ರ ಮುಜುಗರ ತಂದಿತ್ತು. ಈ ಹಿನ್ನಲೆಯಲ್ಲಿ ಪ್ರತಿನಿಧಿಗಳಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆದರೆ ಸರಿಯಾದ ಸಮಯಕ್ಕೆ ರಾಜಿನಾಮೆ ಸಲ್ಲಿಸದವರಿಗೆ ಈ ಬಾರಿಯ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡಮತದಾನ ಮಾಡಿದ ಏಳು ಮಂದಿ ಯಾರು ಎಂದು ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆರು ಮಂದಿ ಸೂಕ್ತ ಸಮಯಕ್ಕೆ ರಾಜಿನಾಮೆ ನೀಡಿದ್ದರು. ಗ್ರಾಮ ಸಮಿತಿ ಒಪ್ಪಿದಲ್ಲಿ ಈ ಆರು ಮಂದಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗುವುದು. ಉಳಿದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಪಕ್ಷದ ಸೂಚನೆಯನ್ನು ತಿರಸ್ಕರಿಸಿದವರಿಗೆ ಯಾವುದೇ ಕಾರಣಕ್ಕೂ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಇರುವುದಿಲ್ಲ ಎಂದು ಹೇಳಿದರು. ಚುನಾವಣೆಯಲ್ಲಿ ಹಿನ್ನಡೆ ಆದರೂ ತೊಂದರೆ ಇಲ್ಲ, ಆದರೆ ಪಕ್ಷದ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ಕೆಲಸ ಮಾಡಿದವರನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಬಿಜೆಪಿ ಮುಖಂಡ ಸುದ್ದಿಗೋಷ್ಠಿಯಲ್ಲಿ ಎ.ವಿ.ತೀರ್ಥರಾಮ, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಸಹಕಾರ ಭಾರತಿ ಸುಳ್ಯ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್ ದೊಡ್ಡತೋಟ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…