Advertisement
ಸುದ್ದಿಗಳು

ಡಿಸಿಸಿ ಬ್ಯಾಂಕ್ ಅಡ್ಡಮತದಾನ : ಪ್ರತಿನಿಧಿಗಳಿಗೆ ಸಹಕಾರಿ ಸಂಘದ ಚುನಾವಣಾ ಸ್ಪರ್ಧೆಗೆ ಅವಕಾಶ ಇಲ್ಲ – ಬಿಜೆಪಿ ಸ್ಪಷ್ಟನೆ

Share

ಸುಳ್ಯ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳು ಅಡ್ಡಮತದಾನ ಮಾಡಿ ಸಹಕಾರ ಭಾರತಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದು ಪಕ್ಷಕ್ಕೆ ತೀವ್ರ ಮುಜುಗರ ತಂದಿತ್ತು. ಈ ಹಿನ್ನಲೆಯಲ್ಲಿ ಪ್ರತಿನಿಧಿಗಳಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆದರೆ ಸರಿಯಾದ ಸಮಯಕ್ಕೆ ರಾಜಿನಾಮೆ ಸಲ್ಲಿಸದವರಿಗೆ ಈ ಬಾರಿಯ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡಮತದಾನ ಮಾಡಿದ ಏಳು ಮಂದಿ ಯಾರು ಎಂದು ನಿಖರವಾಗಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ ನೀಡಲಾಗಿತ್ತು. ಆರು ಮಂದಿ ಸೂಕ್ತ ಸಮಯಕ್ಕೆ ರಾಜಿನಾಮೆ ನೀಡಿದ್ದರು. ಗ್ರಾಮ ಸಮಿತಿ ಒಪ್ಪಿದಲ್ಲಿ ಈ ಆರು ಮಂದಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಲಾಗುವುದು. ಉಳಿದವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಪಕ್ಷದ ಸೂಚನೆಯನ್ನು ತಿರಸ್ಕರಿಸಿದವರಿಗೆ ಯಾವುದೇ ಕಾರಣಕ್ಕೂ ಸಹಕಾರ ಭಾರತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಇರುವುದಿಲ್ಲ ಎಂದು ಹೇಳಿದರು. ಚುನಾವಣೆಯಲ್ಲಿ ಹಿನ್ನಡೆ ಆದರೂ ತೊಂದರೆ ಇಲ್ಲ, ಆದರೆ ಪಕ್ಷದ ತತ್ವ, ಸಿದ್ಧಾಂತಗಳಿಗೆ ವಿರುದ್ಧವಾಗಿ ಕೆಲಸ ಮಾಡಿದವರನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಮುಖಂಡ ಸುದ್ದಿಗೋಷ್ಠಿಯಲ್ಲಿ ಎ.ವಿ.ತೀರ್ಥರಾಮ, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಸಹಕಾರ ಭಾರತಿ ಸುಳ್ಯ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್ ದೊಡ್ಡತೋಟ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

38 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

1 hour ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago