ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.
ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…
ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ…