ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.
ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…