ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು ಆಸ್ಪತ್ರೆಯಲ್ಲಿಯೇ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜ್ಯಾರಿ ನಿರ್ದೇಶನಾಲಯದ ವಶದಲ್ಲಿ ವಿಚಾರಣೆಯಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಸಿಂಘ್ವಿ ಹಾಗೂ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ಮುಂದೂಡಿದರು.
ಈ ಸಂದರ್ಭ ಜಾರಿ ನಿರ್ದೇಶನಾಲಯ ಪರ ವಕೀಲರಾದ ಕೆ ಎಂ ನಟರಾಜ ಇನ್ನಷ್ಟು ವಿಚಾರಣೆ ನಡೆಯಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದು ವಾದ ಮಂಡಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…