Advertisement
Political mirror

ಡಿ ಕೆ ಶಿವಕುಮಾರ್ ಪ್ರಕರಣ : ಜಾರಿನಿರ್ದೇಶನಾಲಯ ಪರ ವಾದ ಮಂಡಿಸಿದವರು ಕೆ ಎಂ ನಟರಾಜ್

Share

ಬೆಂಗಳೂರು: ಅಕ್ರಮ ಹಣ ಪತ್ತೆ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಕಸ್ಟಡಿಗೆ ವಹಿಸಲಾಗಿದೆ.

ಅಜಯ್ ಕುಮಾರ್ ಕುಹಾರ್ ನೇತೃತ್ವದ ಏಕಸದಸ್ಯ ಪೀಠ, ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರೆ ಇಡಿ ಪರ ವಕೀಲ ಕೆ.ಎಂ.ನಟರಾಜ್ ಪ್ರತಿವಾದ ಮಂಡಿಸಿದರು. ಜೊತೆಗೆ ಇಲಾಖೆಯ ಅಧಿಕಾರಿಗಳ ವಶಕ್ಕೆ ಶಿವಕುಮಾರ್ ಅವರನ್ನು ನ್ಯಾಯಾಧೀಶರು ವಹಿಸುವಂತಹ ಖಡಕ್ ಪ್ರತಿವಾದ ಮಂಡಿಸುವಲ್ಲಿ ನಟರಾಜ್ ಯಶ್ವಸಿಯಾಗಿದ್ದಾರೆ.

ನಟರಾಜ್ ಪುತ್ತೂರಿನ ಈಶ್ವರಮಂಗಲದವರು:

ಕೆ.ಎಂ.ನಟರಾಜ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಈಶ್ವರಮಂಗಲದವರು. ವಕೀಲ ವೃತ್ತಿಯಲ್ಲಿ ಕಾರ್ಯ ಆರಂಭಿಸಿದ ಕೆ.ಎಂ.ನಟರಾಜ್ ಇಂದು ಉನ್ನತ ಹುದ್ದೆಯನ್ನು ಅಲಂಕರಿಸುವಲ್ಲಿ ಯಶ್ವಸಿಯಾಗಿದ್ದಾರೆ. 2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಅವಧಿಯಲ್ಲಿ ಉಚ್ಛ ನ್ಯಾಯಾಲಯದ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಕೆ.ಎಂ ನಟರಾಜ್, ದತ್ತ ಪೀಠ, ಚರ್ಚ್‍ಗಳ ಮೇಲಿನ ದಾಳಿ ಸೇರಿದಂತೆ ಹೈ ಟೆನ್ಷನ್ ಪ್ರಕರಣಗಳಲ್ಲಿ ಸರಕಾರದ ಪರ ವಾದ ಮಂಡಿಸಿದ್ದರು.

ಬಳಿಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಎನ್‍ಡಿಎ-1 ರ ಅವಧಿಯಲ್ಲಿ ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಕೋರ್ಟ್ ಫಾರ್ ಸೌತ್ ಇಂಡಿಯಾ ಹುದ್ದೆಯನ್ನು ಅಲಂಕರಿಸಿದರು. ಇದರಲ್ಲಿ ಪ್ರಮುಖವಾಗಿ ದಕ್ಷಿಣ ಭಾರತದ 6 ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳ ಪ್ರಕರಣಗಳಲ್ಲಿ ಎನ್‍ಡಿಎ-1 ಪರ ನಟರಾಜ್ ವಾದ ಮಂಡಿಸುತ್ತಿದ್ದರು. ಕೆ.ಎಂ.ನಟರಾಜ್‍ರ ಕಾರ್ಯಕ್ಷಮತೆಯನ್ನು ಕಂಡ ಪ್ರಧಾನಿ ನರೇಂದ್ರ ಮೋದಿ, ನಟರಾಜ್‍ರನ್ನು ಎನ್‍ಡಿಎ-2 ರ ಅವಧಿಗೆ ಆಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಂಕೋರ್ಟ್ ಫಾರ್ ಇಂಡಿಯಾ ಹುದ್ದೆ ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago