Advertisement
Political mirror

ಡಿ ಕೆ ಶಿವಕುಮಾರ್ ಪ್ರಕರಣ : ಜಾರಿನಿರ್ದೇಶನಾಲಯ ಪರ ವಾದ ಮಂಡಿಸಿದವರು ಕೆ ಎಂ ನಟರಾಜ್

Share

ಬೆಂಗಳೂರು: ಅಕ್ರಮ ಹಣ ಪತ್ತೆ ಆರೋಪ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಕಸ್ಟಡಿಗೆ ವಹಿಸಲಾಗಿದೆ.

ಅಜಯ್ ಕುಮಾರ್ ಕುಹಾರ್ ನೇತೃತ್ವದ ಏಕಸದಸ್ಯ ಪೀಠ, ಡಿ.ಕೆ.ಶಿವಕುಮಾರ್ ಅವರನ್ನು 9 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರೆ ಇಡಿ ಪರ ವಕೀಲ ಕೆ.ಎಂ.ನಟರಾಜ್ ಪ್ರತಿವಾದ ಮಂಡಿಸಿದರು. ಜೊತೆಗೆ ಇಲಾಖೆಯ ಅಧಿಕಾರಿಗಳ ವಶಕ್ಕೆ ಶಿವಕುಮಾರ್ ಅವರನ್ನು ನ್ಯಾಯಾಧೀಶರು ವಹಿಸುವಂತಹ ಖಡಕ್ ಪ್ರತಿವಾದ ಮಂಡಿಸುವಲ್ಲಿ ನಟರಾಜ್ ಯಶ್ವಸಿಯಾಗಿದ್ದಾರೆ.

ನಟರಾಜ್ ಪುತ್ತೂರಿನ ಈಶ್ವರಮಂಗಲದವರು:

ಕೆ.ಎಂ.ನಟರಾಜ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಈಶ್ವರಮಂಗಲದವರು. ವಕೀಲ ವೃತ್ತಿಯಲ್ಲಿ ಕಾರ್ಯ ಆರಂಭಿಸಿದ ಕೆ.ಎಂ.ನಟರಾಜ್ ಇಂದು ಉನ್ನತ ಹುದ್ದೆಯನ್ನು ಅಲಂಕರಿಸುವಲ್ಲಿ ಯಶ್ವಸಿಯಾಗಿದ್ದಾರೆ. 2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದ ಅವಧಿಯಲ್ಲಿ ಉಚ್ಛ ನ್ಯಾಯಾಲಯದ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಕೆ.ಎಂ ನಟರಾಜ್, ದತ್ತ ಪೀಠ, ಚರ್ಚ್‍ಗಳ ಮೇಲಿನ ದಾಳಿ ಸೇರಿದಂತೆ ಹೈ ಟೆನ್ಷನ್ ಪ್ರಕರಣಗಳಲ್ಲಿ ಸರಕಾರದ ಪರ ವಾದ ಮಂಡಿಸಿದ್ದರು.

ಬಳಿಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಎನ್‍ಡಿಎ-1 ರ ಅವಧಿಯಲ್ಲಿ ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಕೋರ್ಟ್ ಫಾರ್ ಸೌತ್ ಇಂಡಿಯಾ ಹುದ್ದೆಯನ್ನು ಅಲಂಕರಿಸಿದರು. ಇದರಲ್ಲಿ ಪ್ರಮುಖವಾಗಿ ದಕ್ಷಿಣ ಭಾರತದ 6 ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳ ಪ್ರಕರಣಗಳಲ್ಲಿ ಎನ್‍ಡಿಎ-1 ಪರ ನಟರಾಜ್ ವಾದ ಮಂಡಿಸುತ್ತಿದ್ದರು. ಕೆ.ಎಂ.ನಟರಾಜ್‍ರ ಕಾರ್ಯಕ್ಷಮತೆಯನ್ನು ಕಂಡ ಪ್ರಧಾನಿ ನರೇಂದ್ರ ಮೋದಿ, ನಟರಾಜ್‍ರನ್ನು ಎನ್‍ಡಿಎ-2 ರ ಅವಧಿಗೆ ಆಡಿಷನಲ್ ಸಾಲಿಸಿಟರ್ ಜನರಲ್ ಆಫ್ ಸುಪ್ರೀಂಕೋರ್ಟ್ ಫಾರ್ ಇಂಡಿಯಾ ಹುದ್ದೆ ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

4 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

4 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

5 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

20 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

20 hours ago