ಸುಳ್ಯ: ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ ಹೋಮ (ಮಣಿ ಸೂಕ್ತ ಹವನ)ನಡೆಯಿತು.
ಬೆಳಿಗ್ಗೆ 10 ರಿಂದ ಆರಂಭಗೊಂಡ ಹೋಮ 12.30ರ ವೇಳೆಗೆ ಪೂರ್ಣಾಹುತಿ ನಡೆಯಿತು. ನಾರಾಯಣ ಅಸ್ರಣ್ಣ ಅವರ ನೇತೃತ್ವದಲ್ಲಿ ಹವನ ನಡೆಯಿತು. ಡಿಕೆಶಿ ಅವರ ಸಂಕಷ್ಟ ನಿವಾರಣೆಯಾಗಬೇಕು, ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸಲಾಯಿತು.
ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಎಂ.ವೆಂಕಪ್ಪ ಗೌಡ, ಭರತ್ ಮುಂಡೋಡಿ, ಪ್ರಮುಖರಾದ ಪಿ.ಸಿ.ಜಯರಾಮ, ಗೀತಾ ಕೋಲ್ಚಾರ್, ದಿನೇಶ್ ಮಡ್ತಿಲ, ಸುಧೀರ್ ರೈ ಮೇನಾಲ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಆನಂದ ಬೆಳ್ಳಾರೆ, ಎಂ.ಬಿ.ಸದಾಶಿವ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…