ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

October 15, 2019
3:20 PM

ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.  ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.

ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror