ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.
ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…