ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.
ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…