ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.
ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…