Advertisement
ಸುದ್ದಿಗಳು

ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

Share

ಹಾಗೇ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್​ಪೋರ್ಟ್​ ಸರಂಡರ್​ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆ 4 ಗಂಟೆಯೊಳಗೆ ಜೈಲು ತಲುಪಲಿದೆ. ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಸಂಸದ ಡಿ.ಕೆ.ಸುರೇಶ್​ ಕೂಡಾ ಇದ್ದರು.

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

12 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

17 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago