Advertisement
ಸುದ್ದಿಗಳು

ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

Share

ಹಾಗೇ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್​ಪೋರ್ಟ್​ ಸರಂಡರ್​ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆ 4 ಗಂಟೆಯೊಳಗೆ ಜೈಲು ತಲುಪಲಿದೆ. ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಸಂಸದ ಡಿ.ಕೆ.ಸುರೇಶ್​ ಕೂಡಾ ಇದ್ದರು.

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

7 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

7 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

12 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

12 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

12 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago