Advertisement
ಸುದ್ದಿಗಳು

ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

Share

ಹಾಗೇ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್​ಪೋರ್ಟ್​ ಸರಂಡರ್​ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆ 4 ಗಂಟೆಯೊಳಗೆ ಜೈಲು ತಲುಪಲಿದೆ. ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಸಂಸದ ಡಿ.ಕೆ.ಸುರೇಶ್​ ಕೂಡಾ ಇದ್ದರು.

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

13 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

4 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

5 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

17 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago