Advertisement
ಸುದ್ದಿಗಳು

ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

Share

ಹಾಗೇ ಅನುಮತಿ ಇಲ್ಲದೆ ವಿದೇಶಕ್ಕೆ ತೆರಳಬಾರದು, ಪಾಸ್​ಪೋರ್ಟ್​ ಸರಂಡರ್​ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕಳೆದ 48 ದಿನಗಳಿಂದ ಜೈಲಿನಲ್ಲಿದ್ದ ಡಿಕೆಶಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಕೋರ್ಟ್ ಆದೇಶದ ಪ್ರತಿ ಇಂದು ಸಂಜೆ 4 ಗಂಟೆಯೊಳಗೆ ಜೈಲು ತಲುಪಲಿದೆ. ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ತೀರ್ಪು ನೀಡುವ ವೇಳೆ ಕೋರ್ಟ್​ ಹಾಲ್​ನಲ್ಲಿ ಸಂಸದ ಡಿ.ಕೆ.ಸುರೇಶ್​ ಕೂಡಾ ಇದ್ದರು.

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ಆರೋಗ್ಯದಲ್ಲಿ ಏರುಪೇರಾದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಡಿ.ಕೆ.ಶಿವಕುಮಾರ್ ಬಳಿಕ ತಿಹಾರ್​ ಜೈಲಿನಲ್ಲಿ ಇದ್ದರು. ಈ ಮಧ್ಯೆ ಜಾಮೀನು ಮಂಜೂರು ಮಾಡುವಂತೆ ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್​ ರೋಹಟಗಿ ಈ ಹಿಂದಿನ ಹಲವು ಅಕ್ರಮ ಹಣಕ್ಕೆ ಸಂಬಂಧಪಟ್ಟ ಪ್ರಕರಣಗಳನ್ನು ಉದಾಹರಣೆ ನೀಡಿ, ಇದು ಬಂಧಿಸುವಂತಹ ಕೇಸ್​ ಅಲ್ಲ. ಇ.ಡಿ.ಅಧಿಕಾರಿಗಳು ಎಡವಿದ್ದಾರೆ ಎಂದು ಹೇಳಿದ್ದರು.

ಅಲ್ಲದೆ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ನುಣುಚಿಕೊಂಡಿಲ್ಲ. ಅವರ ಆರೋಗ್ಯವೂ ಸರಿಯಾಗಿಲ್ಲ. ಈ ಎಲ್ಲ ವಿಚಾರಗಳನ್ನೂ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ವಾದ ಮಾಡಿದ್ದ ಇ.ಡಿ.ಪರ ವಕೀಲ ನಟರಾಜ್​, ಡಿ.ಕೆ.ಶಿವಕುಮಾರ್​ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು. ಅವರ ಪ್ರಕರಣದಲ್ಲಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ವಿಚಾರಣೆಗೆ ಸಹಕರಿಸಿಲ್ಲ. ಇನ್ನೂ ವಿಚಾರಣೆ ಬಾಕಿಯಿದೆ ಎಂದು ಹೇಳಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಸುರೇಶ್​ ಕುಮಾರ್​ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago